ಬಿಜೆಪಿ ವಿರುದ್ದ ಹೈಗ್ರೌಂಡ್ ಠಾಣೆಗೆ ದೂರು ನೀಡಿದ ಸಿದ್ದರಾಮಯ್ಯ ಮತ್ತು ಡಿಕೆಶಿ

ಬುಧವಾರ, 25 ಜನವರಿ 2023 (15:57 IST)
ಬಿಜೆಪಿ ನಾಯಕರಿಗೆ ಚುನಾವಣೆಯಲ್ಲಿ ಗೆಲ್ಲಲ ಎಂಬುದು ಗೊತ್ತಿದೆ ಹೀಗಾಗಿ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಕುತಂತ್ರ ಮಾಡ್ತಿದ್ದಾರೆಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.ಅಲ್ಲದೇ ಬಿಜೆಪಿ ವಿರುದ್ದ ದಾಖಲೆ ಸಮೇತ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
 
ಇನ್ನು ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ರಮೇಶ್ ಜಾರಕಿ ಆರೋಪಕ್ಕೆ  ಪ್ರತಿಕ್ರಿಯೆ ನೀಡಿದ್ದಾರೆ.ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..?ನಮ್ಮ ಕಾಂಗ್ರೆಸ್ ಪಾರ್ಟಿ ಹಾಳು ಮಾಡಿದ್ದೇ ಅವನು.ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಸರ್ಕಾರ ಬೀಳಿಸಿದ್ದನಲ್ಲಪ್ಪಾ.ಅದೇನೋ ತನಿಖೆ ಮಾಡಿಸ್ತೀನಿ ಅಂದ್ನಲ್ಲಾ ಮಾಡಿಸೋಕೆ ಹೇಳಿ ,ಸಿಬಿಐ ತನಿಖೆ ಮಾಡಿಸೋಕೆ ಹೇಳಿ ಅಂತಾ ಡಿಕೆಶಿ ರಮೇಶ್ ಜಾರಕಿಹೊಳಿ ವಿರುದ್ದ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ