ನಿಗಮ ಮಂಡಳಿಯಲ್ಲಿ ಶಾಸಕರಿಗೆ ಸ್ಥಾನ: ಅತೃಪ್ತ ಶಾಸಕರನ್ನು ಸಮಾಧಾನಿಸಿದ ಸಿಎಂ

ಮಂಗಳವಾರ, 25 ಅಕ್ಟೋಬರ್ 2016 (11:43 IST)
ನಿಗಮ ಮಂಡಳಿಗಳಲ್ಲಿ ಶಾಸಕರಿಗೆ ಸ್ಥಾನ ನೀಡುವಲ್ಲಿ ಹೈ-ಕಮಾಂಡ್ ಮನವೊಲಿಸಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಸಂಪುಟದಲ್ಲಿ ಸ್ಥಾನ ನಿಗದೇ ವಂಚಿತರಾಗಿದ್ದ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅತೃಪ್ತ ಶಾಸಕರ ಅಸಮಾಧಾನವನ್ನು ದೂರು ಮಾಡಿದ್ದಾರೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿರುವ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಬೇಕು ಎಂದು ಹೈ-ಕಮಾಂಡ್ ಆದೇಶಿಸಿತ್ತು.
 
ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಹಿತದೃಷ್ಟಿಯಿಂದ ನಿಗಮ ಮಂಡಳಿಯಲ್ಲಿ 20 ಶಾಸಕರಿಗೆ ಸ್ಥಾನ ನೀಡಿದರೇ ಪಕ್ಷಕ್ಕೆ ಹೆಚ್ಚಿನ ಲಾಭವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಮನವರಿಕೆ ಮಾಡಿಕೊಟ್ಟಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ