ಎಲ್ಲಾ ಸಮಯದಲ್ಲೂ ಭ್ರಷ್ಟರನ್ನು ರಕ್ಷಿಸಲು ಸಾಧ್ಯವಿಲ್ಲ: ಸಿಎಂಗೆ ಜಾವ್ಡೇಕರ್ ತಿರುಗೇಟು

ಶನಿವಾರ, 28 ಅಕ್ಟೋಬರ್ 2017 (08:42 IST)
ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಲೇಬೇಕು ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ನಿರ್ದೇಶನದಂತೆ ಸಿಬಿಐ ಎಫ್ಐಆರ್ ದಾಖಲಿಸಿಲ್ಲ. ಹೊರತಾಗಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಎಫ್ಐಆರ್ ದಾಖಲಿಸಿದೆ. ಹೀಗಾಗಿ ಜಾರ್ಜ್ ರನ್ನು ರಕ್ಷಿಸಿಕೊಳ್ಳಲು ಸಿಎಂಗೆ ಸಾಧ್ಯವಿಲ್ಲ ಎಂದಿದ್ದಾರೆ.

ಗಣಪತಿ ಪ್ರಕರಣದಲ್ಲಿ ಫೋರೆನ್ಸಿಕ್ ವರದಿಗೂ ಮೊದಲೇ ಬಿ ರಿಪೋರ್ಟ್ ಹಾಕಲಾಗಿತ್ತು. ಆದರೆ ಸುಪ್ರೀಂಕೋರ್ಟ್ ಬಿ ರಿಪೋರ್ಟ್ ಅನ್ನು ಒಪ್ಪಿಕೊಂಡಿಲ್ಲ ಎಂದು ತಿಳಿಸಿದರು. ಸುಪ್ರೀಂಕೋರ್ಟ್ ನಿರ್ದೇಶನದಂತೆ ಸಿಬಿಐ ಕೆಲಸ ಮಾಡುತ್ತಿದೆ. ಎಲ್ಲಾ ಸಮಯದಲ್ಲೂ ಭ್ರಷ್ಟರನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜಾವ್ಡೇಕರ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ