ಸಿದ್ದರಾಮಯ್ಯ ಬೆಂಗಾವಲು ವಾಹನಕ್ಕೆ ಅಡ್ಡ, ಜನಾರ್ದನ ರೆಡ್ಡಿ ಕಾರು ವಶಕ್ಕೆ
ಈ ಘಟನೆ ಕುರಿತು ವಿಡಿಯೊ ಹೇಳಿಕೆ ನೀಡಿರುವ ಜನಾರ್ದನ ರೆಡ್ಡಿ ಅವರು ತುರ್ತು ಕಾರ್ಯಕ್ರಮದ ಹಿನ್ನೆಲೆ ಆ ರೀತಿ ಹೋಗಬೇಕಾಯಿತು. ಬಳ್ಳಾರಿಯ ಮನೆಯಲ್ಲಿ ಅಂದು ಹೋಮ ಆಯೋಜಿಸಲಾಗಿತ್ತು. ತುರ್ತಾಗಿ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗಬೇಕಿದ್ದರೂ ಸಂಚಾರ ದಟ್ಟಣೆಯಲ್ಲಿಯೇ ಸುಮಾರು ಅರ್ಧಗಂಟೆ ಕಾದಿದ್ದೇನೆ. ಯಾರೇ ಮುಖ್ಯಮಂತ್ರಿಯಾದರೂ ಜನರಿಗೆ ತೊಂದರೆ ಕೊಡಬಾರದು ಎಂದಿದ್ದಾರೆ.
ತುರ್ತಾಗಿ ಕಾರ್ಯಕ್ರಮಕ್ಕೆ ಹೋಗಬೇಕಿದ್ದರಿಂದ ಮಾತ್ರ ರಸ್ತೆ ವಿಜಭಕ ದಾಟಿ ಹೋಗಿದ್ದೇನೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ. ಮಾಧ್ಯಮಗಳೂ ಇದನ್ನು ತಪ್ಪಾಗಿ ಗ್ರಹಿಸಿವೆ ಎಂದು ಹೇಳಿದ್ದಾರೆ.