ರಾಜ್ಯಪಾಲರ ವಿರುದ್ಧ ಬೀದಿಗಿಳಿದ ಸಿದ್ಧರಾಮಯ್ಯ ಅಭಿಮಾನಿಗಳು: ಸರ್ಕಾರ ಅಸ್ಥಿರಗೊಳಿಸಲು ಯತ್ನ ಎಂದು ಆಕ್ರೋಶ
ದೇಶದ ರಾಜಕೀಯ ಇತಿಹಾಸದಲ್ಲೇ ರಾಜ್ಯಪಾಲರೊಬ್ಬರು ಪ್ರಾಮಾಣಿಕ ಮುಖ್ಯಮಂತ್ರಿ ಹಾಗೂ ನಿರಪರಾಧಿಯನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಕುತಂತ್ರಕ್ಕೆ ತಲೆಬಾಗಿ ಅನುಮತಿ ನೀಡಿರುವುದು ಅತ್ಯಂತ ದುರದೃಷ್ಟಕರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ತಿಳಿಸಿದ್ದಾರೆ.
ಇನ್ನೂ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಸಿದ್ದರಾಮಯ್ಯ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ.