ಅತೃಪ್ತ ಶಾಸಕನಿಗೆ ಬಿಸಿ ಮುಟ್ಟಿಸಿದ ಸಿದ್ದರಾಮಯ್ಯ

ಗುರುವಾರ, 25 ಜುಲೈ 2019 (13:54 IST)
ಸಿದ್ದರಾಮಯ್ಯ ಹೇಳಿದಂತೆ ನಾನು ಕೇಳಿದ್ದೇನೆ ಎಂದಿರುವ ಅತೃಪ್ತ ಶಾಸಕನ ಹೇಳಿಕೆಗೆ ಮಾಜಿ ಸಿಎಂ ಭರ್ಜರಿಯಾಗಿ ತಿರುಗೇಟು ನೀಡಿದ್ದಾರೆ.

ಮುಂಬೈ ಸೇರಿದ್ದ ಅತೃಪ್ತ ಶಾಸಕ ಶಿವರಾಮ್ ಹೆಬ್ಬಾರ್ ರಾಜ್ಯಕ್ಕೆ ತಡರಾತ್ರಿ ಹೀಗೆ ಬಂದು ಹಾಗೆ ಹೋಗಿದ್ದಾರೆ. ಈ ನಡುವೆ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು.

ತಮ್ಮ ವಿರುದ್ಧ ಶಿವರಾಮ್ ಮಾಡಿರೋ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಾನು ಹೇಳಿದಂತೆ ನಡೆದುಕೊಂಡಿದ್ದೇನೆ ಅಂತ ಶಾಸಕ ಶಿವರಾಮ್ ಹೆಬ್ಬಾರ್ ನನ್ನ  ಮುಂದೆ ನಿಂತು ಹೇಳಿಕೆ ಕೊಡಲಿ. ನಾನು ಅದಕ್ಕೆ ಉತ್ತರ ಕೊಡುತ್ತೇನೆ ಎಂದು ಟಾಂಗ್ ನೀಡಿದ್ದಾರೆ.

ಅತೃಪ್ತ ಶಾಸಕ ಹೆಬ್ಬಾರ್ ನೀಡಿರೋ ಹೇಳಿಕೆ ಹಿಂದೆ ಷಡ್ಯಂತ್ರ ಅಡಗಿದೆ. ಅದು ದುರುದ್ದೇಶದಿಂದ ಕೂಡಿದೆ ಅಂತ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ