ಪ್ರಧಾನಿ ಮೋದಿಯೊಬ್ಬನೇ ದೇಶಭಕ್ತ- ಪ್ರಧಾನಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಗುರುವಾರ, 13 ಜೂನ್ 2019 (12:10 IST)
ಮೈಸೂರು : ಭಾರತೀಯ ವಾಯುಸೇನೆ ವಿಮಾನ AN-32 ನಾಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.




ಪ್ರಧಾನಿ ಮೋದಿ, ಅಮಿತ್ ಶಾ ಅವರ ಸತ್ಯದ ಬಗ್ಗೆ ನಾವು ಮಾತನಾಡುವ ಹಾಗೇ ಇಲ್ಲ. ಸತ್ಯ ಹೇಳಲಾಗದಂತಹ ಕಷ್ಟದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಪುಲ್ವಾಮಾ ಘಟನೆ ಬಗ್ಗೆಯೂ ನಾವು ಪ್ರಶ್ನೆ ಕೇಳುವಂತಿಲ್ಲ. ನೋಡಿ ನಮ್ಮಪರಿಸ್ಥಿತಿ ಹೀಗಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಹಾಗೇ ಪ್ರಧಾನಿ ಮೋದಿಯೊಬ್ಬನೇ ದೇಶಭಕ್ತ. ಅವನಿಂದಲೇ ದೇಶ ಉಳಿಯುವುದೆಂದು ಬಿಂಬಿಸಲಾಯ್ತು. ದೇಶದ ಜಿಡಿಪಿ ದರ ಕುಸಿದಿದೆ, ಇದನ್ನು ಪ್ರಶ್ನಿಸಬಾರದಾ? ಸಂವಿಧಾನದಲ್ಲಿ ನಮಗೆ ಪ್ರಶ್ನೆ ಮಾಡುವ ಹಕ್ಕಿಲ್ಲವೇ ಎಂದು ಪ್ರಧಾನಿ ವಿರುದ್ಧ  ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ