ಹೆಗಡೆ ಗ್ರಾ.ಪಂ ಸದಸ್ಯನಾಗಲು ಕೂಡ ಲಾಯಕ್ಕಿಲ್ಲ ಎಂದ ಸಿದ್ದರಾಮಯ್ಯ

ಶುಕ್ರವಾರ, 22 ಡಿಸೆಂಬರ್ 2017 (08:45 IST)
ಸಾಧನಾ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಗ್ರಾಮ ಪಂಚಾಯಿತಿ ಸದಸ್ಯನಾಗಲು ಕೂಡ ಲಾಯಕ್ಕಿಲ್ಲ ಎಂದು ಹೇಳಿದ್ದಾರೆ.

ಜನರ ಸಮಸ್ಯೆಗಳನ್ನು ಬಗೆಹರಿಸಲು ಬಿಜೆಪಿಯವರು ಪ್ರಯತ್ನಿಸುವುದಿಲ್ಲ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಾರೆ. ಇವರಿಂದ ದೇಶ ಉದ್ದಾರವಾಗುತ್ತಾ ಎಂದು ಪ್ರಶ್ನಿಸಿದರು.

ಯಡಿಯೂರಪ್ಪ, ಜನಾರ್ಧನರೆಡ್ಡಿ, ಕಟ್ಟಾ ಸುಬ್ರಮಣ್ಯ ನಾಯ್ಡು, ಹಾಲಪ್ಪ, ಸುರೇಶ ಬಾಬು, ಆನಂದ ಸಿಂಗ್ ಸೇರಿದಂತೆ ಅನೇಕರು ಜೈಲಿಗೆ ಹೋಗಿದ್ದಾರೆ. ಇಂತಹವರನ್ನು ಜನರು ನಂಬುತ್ತಾರಾ ಎಂದಿರುವ ಅವರು ಕಾಂಗ್ರೆಸ್ ಸರ್ಕಾರ ಬಡವರಿಗೆ ಅನುಕೂಲ ಮಾಡಲಾಗಿದೆ. ಅನ್ನ, ನೀರು, ವಿದ್ಯುತ್ ಒದಗಿಸಲಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ