ಸಿದ್ದರಾಮಯ್ಯ ಅವರು ಸೋಲುವ ಭಯದಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ- ಹೆಚ್.ಡಿ.ಕುಮಾರಸ್ವಾಮಿ

ಭಾನುವಾರ, 15 ಏಪ್ರಿಲ್ 2018 (12:53 IST)
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಹಿನ್ನಲೆಯಲ್ಲಿ ಇದೀಗ ಸಿದ್ದರಾಮಯ್ಯ ಅವರು ಸೋಲುವ ಭಯದಿಂದ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಸೋಲುವ ಭಯ ಸಿದ್ದರಾಮಯ್ಯ ಅವರಿಗೆ ಕಾಡುತ್ತಿದೆ. ಇದ್ದಕ್ಕಿದ್ದಂತೆ ಇರುವೆ ಬಿಟ್ಟುಕೊಂಡರು ಎಂಬ ಸ್ಥಿತಿ ಅವರಿಗಾಗಿದೆ. ಪುತ್ರ ವ್ಯಾಮೋಹಕ್ಕೆ ವರುಣಾ ಬಿಟ್ಟು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಿದ್ದಾರೆ. ಆದರೆ ಇಲ್ಲಿಯೂ ಅವರಿಗೆ ಗೆಲ್ಲುವ ವಿಶ್ವಾಸ ಇಲ್ಲ. ಹಾಗಾಗಿ ಬಾದಾಮಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಸೋಲಿಸಲು ನಾನು ಪ್ರಯತ್ನ ಪಡಬೇಕಿಲ್ಲ. ಇಲ್ಲಿನ ಜನರೇ ಅವರನ್ನು ಸೋಲಿಸುತ್ತಾರೆ ಎಂದು ಹೇಳಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ