ಶಿವಮೊಗ್ಗ ಘಟನೆಗಳಿಗೆ ಸಿದ್ದರಾಮಯ್ಯ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಕಿಡಿ

ಶುಕ್ರವಾರ, 19 ಆಗಸ್ಟ್ 2022 (19:29 IST)
ಎಸ್​​ಡಿಪಿಐ ಕಾರ್ಯಕರ್ತರ ವಿರುದ್ಧ ಇದ್ದ ಪ್ರಕರಣಗಳನ್ನು 2015 ರಲ್ಲಿ ಸಿದ್ದರಾಮಯ್ಯ ವಾಪಸ್ ತೆಗೆದುಕೊಂಡಿದ್ದೇ ಕಾರಣ. ಇನ್ನಾದರೂ ಅವರು ಸಮಾಜ ವಿರೋಧಿ ಶಕ್ತಿಗಳಿಗೆ ಚಿತಾವಣೆ ಕೊಡೋದು ನಿಲ್ಲಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಬಗ್ಗೆ ಕಾಂಗ್ರೆಸ್​​ನವರಿಗೆ ಏನು ಗೊತ್ತು? ಸಾವರ್ಕರ್ ಫೋಟೋ ಶಿವಮೊಗ್ಗದಲ್ಲಿ ಒಂದು ಸರ್ಕಲ್​​ಗೆ ಹಾಕಿದರೆ ಅವರಿಗೆ ಯಾಕೆ ಉರಿ? ಸಿದ್ದರಾಮಯ್ಯ ಯಾಕೆ ಅದಕ್ಕೆ ಸಪೋರ್ಟ್ ಮಾಡುತ್ತಾರೆ? ಮುಸಲ್ಮಾನರ ಏರಿಯಾಕ್ಕೆ ಹಾಕಬೇಡಿ ಎಂದರೆ ಮುಸಲ್ಮಾನರಿಗೆ 1947ರಲ್ಲೇ ಪಾಕಿಸ್ತಾನ ಕೊಟ್ಟಿದ್ದಾರೆ ಹೋಗಬೇಕಿತ್ತು. ಇಲ್ಲಿ ಇರುವವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಿಗೆ ಗೌರವ ಕೊಟ್ಟೇ ಬದುಕಬೇಕಾಗುತ್ತದೆ ಎಂದು ಹರಿಹಾಯ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ