ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಟೌನ್ ಹಾಲ್ನಿಂದ ಫ್ರೀಢಂ ಪಾರ್ಕ್ವರೆಗೆ ವಾಕಾಥಾನ್ ಹೋಗುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆ ಗೃಹ ಸಚಿವರಾದ ಕೆ.ಜೆ.ಜಾರ್ಜ್, ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ಸೇರಿದಂತೆ ಸರ್ಕಾರದ ಇತರೆ ಸಂಪುಟ ಸಹೋದ್ಯೋಗಿಗಳು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದ್ದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮೇಯರ್ ಮಂಜುನಾಥ್ ರೆಡ್ಡಿ, ಕಾಂಗ್ರೆಸ್ ನೇತೃತ್ವದ ಬಿಬಿಎಂಪಿ ಆಡಳಿತದ ಈ ಅವಧಿಯಲ್ಲಿ ಕೇಂದ್ರ ಸರ್ಕಾರದ ಈ ಅಭಿಯಾನವನ್ನು ಯಶಸ್ವಿಗೊಳಿಸಲು ನಿರ್ಧರಿಸಿದ್ದು, ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡಲಿದ್ದೇವೆ. ಇಂದಿನ ಈ ಅಭಿಯಾನಕ್ಕೆ 300ಕ್ಕೂ ಅಧಿಕ ಸಂಘ ಸಂಸ್ಥೆಗಳು ಸಾಥ್ ನೀಡಿದ್ದು, ಎಲ್ಲರಿಗೂ ಧನ್ಯವಾದ ಎಂದರು.