ಸಿದ್ದರಾಮಯ್ಯರನ್ನು ಮುಂದಿನ ಅವಧಿಗೂ ಸಿಎಂ ಮಾಡಿ ಋಣ ಸಂದಾಯ- ಎಚ್.ಆಂಜನೇಯ

ಸೋಮವಾರ, 29 ಜನವರಿ 2018 (19:34 IST)

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಋಣ ತೀರುಸುವ ಕೆಲಸ ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸೌಲಭ್ಯಗಳ ಜಾಗೃತಿ ಹಾಗೂ ಬಜೆಟ್ ಪೂರ್ವಭಾವಿ ಚರ್ಚೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಯಾವುದೇ ರಾಜ್ಯದಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ನೀಡದಷ್ಟು ಸೌಲಭ್ಯಗಳನ್ನು ಸಿದ್ದರಾಮಯ್ಯ ನೀಡಿದ್ದಾರೆ. ಆದ್ದರಿಂದ ಉಪಕಾರ ಮಾಡಿದವರನ್ನು ಸ್ಮರಿಸುವ ಮೂಲಕ ಋಣ ತೀರಿಸಬೇಕು ಎಂದಿದ್ದಾರೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕಾಗಿ ಯಾವುದೇ ಸೌಲಭ್ಯ ಕೇಳಿದರೂ ಕಣ್ಣುಮುಚ್ಚಿಕೊಂಡು ಒಪ್ಪಿಗೆ ನೀಡುತ್ತಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ