ಸಿದ್ದರಾಮಯ್ಯಗೆ ಅಹಿಂದ ನೆನಪಾಗುವುದೇ ಸಿಎಂ ಕುರ್ಚಿಗೆ ಕಂಟಕ ಬಂದಾಗಲೆಲ್ಲ: ಬಿವೈ ವಿಜಯೇಂದ್ರ

Sampriya

ಶುಕ್ರವಾರ, 18 ಜುಲೈ 2025 (15:45 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವುದು ಸಾಧನಾ ಸಮಾವೇಶವಲ್ಲ, ಹೈಕಮಾಂಡ್‌ಗೆ ಬ್ಲಾಕ್‌ಮೇಲ್ ಮಾಡುತ್ತಿರುವ ಸಮಾವೇಶ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆ ಮಾಡಿದರು. 

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಸಿಎಂ ಕುರ್ಚಿ ಅಲುಗಾಡುವ ಸಂದರ್ಭ ಎದುರಾದಾಗಲೆಲ್ಲಾ ಅವರು ಸಮಾವೇಶ ನಡೆಸುತ್ತಾರೆ. ಈ ಮೂಲಕ ಅವರ ಪಕ್ಷದ ಹೈಕಮಾಂಡ್ ಬೆದರಿಸುವ ತಂತ್ರ ಮಾಡುತ್ತಾರೆ ಎಂದು ಆರೋಪಿಸಿದರು.

ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಸಮಯವನ್ನೇ ನೀಡಲಿಲ್ಲ. ಹೀಗಾಗಿ ಸವಾಲು ಹಾಕುವ ಉದ್ದೇಶದಿಂದ ಈ ಸಮಾವೇಶ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು.

ಏನು ಕಡಿದು ಕಟ್ಟೆಹಾಕಿದ್ದಾರೆಂದು ಸಮಾವೇಶ ಮಾಡುತ್ತಿದ್ದಾರೆ. ಮುಡಾ ಹಗರಣದ ಸಂದರ್ಭದಲ್ಲೂ ಮೈಸೂರಿನಲ್ಲಿ ಸಮಾವೇಶ ನಡೆಸಿದ್ದರು. ಕುರ್ಚಿಗೆ ಕಂಟಕ ಬಂದಾಗೆಲ್ಲಾ ಅವರಿಗೆ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರು) ಸಮುದಾಯದವರು ನೆನಪಾಗುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ