ಶಿಷ್ಯನ ಪುತ್ರನ ವಿರುದ್ಧ ಸಿದ್ದರಾಮಯ್ಯ ಭಾರೀ ಪ್ರಚಾರ

ಶುಕ್ರವಾರ, 10 ಮೇ 2019 (16:52 IST)
ಚಿಂಚೋಳಿ ಕ್ಷೇತ್ರದಲ್ಲಿ ಇಂದಿನಿಂದ 3 ದಿನಗಳ ಕಾಲ ಮಾಜಿ ಸಿಎಂ ಸಿದ್ರಾಮಯ್ಯ ಕ್ಯಾಂಪೇನ್ ನಡೆಸುತ್ತಿದ್ದಾರೆ.

ಶಿಷ್ಯ ಮಾಜಿ ಶಾಸಕ ಡಾ. ಉಮೇಶ್ ಜಾಧವ್ ಪುತ್ರ ಅವಿನಾಶ್ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ ಸಿದ್ದರಾಮಯ್ಯ.

ಮೂರು ದಿನಗಳ ಕಾಲ ಚಿಂಚೋಳಿಯ 10 ಗ್ರಾಮಗಳಲ್ಲಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಪರ ಮತಯಾಚನೆ ಮಾಡಲಿದ್ದಾರೆ ಸಿದ್ರಾಮಯ್ಯ. ಇತ್ತ ಬಿಜೆಪಿಯಿಂದ ಇಂದು ಎರಡು ತಂಡಗಳ ಮೂಲಕ ಮತಯಾಚನೆ ನಡೆಯುತ್ತಿದೆ.

ಮಾಜಿ ಸಚಿವರಾದ ವಿ. ಸೋಮಣ್ಣ ಮತ್ತು ಬಾಬುರಾವ್ ಚಿಂಚನಸೂರು, ಆರ್. ಅಶೋಕ್ ನೇತೃತ್ವದಲ್ಲಿ ಕ್ಯಾಂಪೇನ್ ನಡೆಸಲಾಗುತ್ತಿದ್ದು, ಕಮಲ ಪಡೆ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಪರ ಮತಯಾಚನೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ