ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

Sampriya

ಶನಿವಾರ, 18 ಅಕ್ಟೋಬರ್ 2025 (17:57 IST)
ಚಿಕ್ಕಮಗಳೂರು: ಎರಡೂವರೆ ವರ್ಷದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ 20ಕ್ಕೂ ಅಧಿಕ ಸರ್ಖಾರಿ ನೌಕರರು ಸರ್ಕಾರದ ಕಾರಣ ಮುಂದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬಿಜೆಪಿ ನಾಯಕ ಸಿಟಿ ರವಿ ಆರೋಪಿಸಿದ್ದಾರೆ. 

ಈ ಸಂಬಂಧ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಣ್ಣಿದ್ದು ಕುರುಡರಂತೆ, ಕಿವಿಯಿದ್ದು ಕಿವುಡರಂತೆ, ಹೃದಯವಿದ್ದು ಮಾನವೀಯತೆ ಸತ್ತಂತೆ ಇದ್ದಾರೆಂದು ಕಿಡಿಕಾರಿದರು. 

ಇನ್ನೂ ಆತ್ಮಹತ್ಯೆಗೆ ಶರಣಾದ ನೌಕರರೆಲ್ಲರು ಸಚಿವರು, ಶಾಸಕರು, ಸಿಬ್ಬಂದಿ, ಸರ್ಕಾರದ ಬೇಜವಾಬ್ದಾರಿ, ಸಂಬಳ ನೀಡದೇ ಇರುವುದರ ಕಾರಣ ನೀಡಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಸರ್ಕಾರಕ್ಕೆ ಹೃದಯ ಇದೆಯೋ, ಇಲ್ವೋ ಗೊತ್ತಿಲ್ಲ, ಮಾನವೀಯತೆ ಸತ್ತಿರೋದು ಗೊತ್ತಾಗ್ತಿದೆ. ಇದು ಸರ್ಕಾರದ ಪ್ರಾಯೋಜಿತ ಕೊಲೆ, ಇದರ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಸರ್ಕಾರದ ಭಕ್ಷಣೆಯ ದಾಹಕ್ಕೆ ಸರ್ಕಾರಿ ನೌಕರರು ಬಲಿಯಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 

ಈ ಎಲ್ಲ ಸಾವಿಗೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಯೇ ಪ್ರಾಯಶ್ಚಿತ ಎಂದರು. 

ಆದರೆ ಸರ್ಕಾರ ಹೃದಯಹೀನ ಸರ್ಕಾರವಾಗಿ, ಮಾನವೀಯತೆ ಸತ್ತಂತೆ ವರ್ತಿಸುತ್ತಿದೆ. ದಪ್ಪ ಚರ್ಮ ಅನ್ನೋಣ ಅಂದ್ರೆ ಆ ದಪ್ಪ ಚರ್ಮಕ್ಕಾದ್ರು ಸ್ವಲ್ಪ ನಾಟುತ್ತೆ. ಚಡಿ ಏಟು ನಾಟದಿದ್ರು, ಕರೆಂಟ್ ಶಾಕ್ ಆದ್ರೂ ನಾಟುತ್ತೆ. ಇದು ದಪ್ಪ ಚರ್ಮವೋ, ಸತ್ತಿರೋ ಚರ್ಮವೋ ಗೊತ್ತಾಗ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ