ಪೆನ್ ಡ್ರೈವ್ ಕೇಸ್ ಗಮನ ಬೇರೆಡೆ ಸೆಳೆಯಲು ಕುಮಾರಸ್ವಾಮಿ ನಾಟಕ: ಸಿದ್ದರಾಮಯ್ಯ

Krishnaveni K

ಶುಕ್ರವಾರ, 24 ಮೇ 2024 (13:43 IST)
ಬೆಂಗಳೂರು: ಇತ್ತೀಚೆಗೆ ತಮ್ಮ ಕುಟುಂಬದವರ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಬೇರೆಡೆ ಸೆಳೆಯಲು ಕುಮಾರಸ್ವಾಮಿ ಈ ರೀತಿ ಫೋನ್ ಟ್ಯಾಪಿಂಗ್ ನಾಟಕ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕುಮಾರಸ್ವಾಮಿ ಏನೇನೋ ಹೇಳುತ್ತಿದ್ದಾರೆ. ಮೊದಲು ಅವರು ಈ ನೆಲದ ಕಾನೂನಿಗೆ ಗೌರವ ಕೊಡಲಿ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಅತ್ಯಂತ ಗಂಭೀರವಾದ ಪ್ರಕರಣ. ಈ ಬಗ್ಗೆ ತನಿಖೆಗೆ ಸಹಕರಿಸಲು ಈಗಾಗಲೇ ಪ್ರಧಾನಿ ಮೋದಿಗೆ ಎರಡು ಬಾರಿ ಪತ್ರ ಬರೆದಿದ್ದಾನೆ. ಆದರೆ ಇದುವರೆಗೆ ಪ್ರತಿಕ್ರಿಯೆ ಬಂದಿಲ್ಲ. ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಹೆಸರು ಎಳೆದು ತರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡುವಂತೆ ಈಗಾಗಲೇ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಅದರಂತೆ ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದುಗೊಳಿಸಲು ಕಾನೂನಾತ್ಮಕ ಪ್ರಕ್ರಿಯೆ ಪರಿಶೀಲಿಸುತ್ತಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ