ಮಂಡ್ಯಕ್ಕೇ ಬಜೆಟ್ ನಲ್ಲಿ ಏನೂ ಕೊಟ್ಟಿಲ್ಲ: ಎಚ್ ಡಿ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್

Krishnaveni K

ಸೋಮವಾರ, 29 ಜುಲೈ 2024 (15:35 IST)
ಬೆಂಗಳೂರು: ಇತ್ತೀಚೆಗೆ ಘೋಷಣೆಯಾಗಿರುವ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

ಕೇಂದ್ರ ಬಜೆಟ್ ಘೋಷಣೆಯಾದ ಬೆನ್ನಲ್ಲೇ ರಾಜ್ಯಕ್ಕೆ ಏನೂ ಸಿಕ್ಕಿಲ್ಲ ಎಂದು ಕಾಂಗ್ರೆಸ್ ನಾಯಕರು ಟೀಕಾ ಪ್ರಹಾರ ನಡೆಸಿದ್ದರು. ಇದರ ಬೆನ್ನಲ್ಲೇ ಎಚ್ ಡಿ ಕುಮಾರಸ್ವಾಮಿ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ರಾಜ್ಯ ನಾಯಕರಿಗೆ ತಿರುಗೇಟು ನೀಡಿದ್ದರು.

ಇದೀಗ ಕುಮಾರಸ್ವಾಮಿ ಮಾತಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಬಿಡಿ, ಮಂಡ್ಯಕ್ಕೇ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಮಂಡ್ಯ ಸಂಸದರೂ ಆಗಿರುವ ಕುಮಾರಸ್ವಾಮಿಗೆ ಸಿದ್ದು ಟಾಂಗ್ ಕೊಟ್ಟಿದ್ದಾರೆ. ಮಂಡ್ಯಕ್ಕೆ ಒಂದು ಕೈಗಾರಿಕೆಯನ್ನಾದರೂ ಕೊಟ್ಟರಾ ಎಂದು ವ್ಯಂಗ್ಯ ಮಾಡಿದ್ದಾರೆ.

ರಾಯಚೂರಿಗೆ ಏಮ್ಸ್ ಆಸ್ಪತ್ರೆ ಕೇಳಿದ್ದೆವು. ಆದರೆ ಕೊಡಲಿಲ್ಲ. ಎಲ್ಲಾ ಕೊಡುಗೆಗಳನ್ನೂ ಆಂಧ್ರ, ಬಿಹಾರಕ್ಕೆ ಕೊಟ್ಟಿದ್ದಾರೆ. ಸ್ವತಃ ಕುಮಾರಸ್ವಾಮಿ ಪ್ರತಿನಿಧಿಸುವ ಮಂಡ್ಯ ಕ್ಷೇತ್ರಕ್ಕೇ ಏನೂ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ಮತ್ತು ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ