ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್
ನಾಡಿನಲ್ಲಿ ಮಳೆ, ಬೆಳೆ ಸಮೃದ್ಧಿಯಾಗಿ, ಸರ್ವರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿ ತುಂಬಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆ ಎಂದಿದ್ದಾರೆ. ಈ ಭಾಗದ ಜನರ ಸಮಸ್ಯೆಗೆ ಧ್ವನಿಯಾಗುವ ಉದ್ದೇಶದಿಂದ ಇಲ್ಲಿ ಸಂಪುಟ ಸಭೆ ನಡೆಸಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯಗೆ ಸಚಿವ ಜಮೀರ್ ಅಹ್ಮದ್ ಕೂಡಾ ಸಾಥ್ ನೀಡಿದ್ದಾರೆ. ಬಳಿಕ ಎಲ್ಲಾ ಸಚಿವರೂ ಭೋಗಿ ನಂದೀಶ್ವರ ದೇವಾಲಯದ ಮುಂದೆ ಫೋಟೋ ಸೆಷನ್ ಕೂಡಾ ನಡೆಸಿದ್ದಾರೆ.