ಪುತ್ರ ರಾಕೇಶ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಬೆಲ್ಜಿಯಂಗೆ ಪ್ರಯಾಣ!
ಗುರುವಾರ, 28 ಜುಲೈ 2016 (10:35 IST)
ವಿದೇಶ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪುತ್ರನ ಆರೋಗ್ಯ ವಿಚಾರಿಸಿಕೊಳ್ಳಲು ಬೆಲ್ಜಿಯಂ ದೇಶದ ಬ್ರಸೆಲ್ಸ್ ನಗರಕ್ಕೆ ಪ್ರಯಾಣ ಬೆಳಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅವರು ಬೆಲ್ಜಿಯಂ ಪ್ರವಾಸದಲ್ಲಿದ್ದು, ಪ್ಯಾಂಕ್ರಿಯಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಚಿಕಿತ್ಸೆಗಾಗಿ ನಿನ್ನೆ ಬೆಂಗಳೂರಿನಿಂದ ವೈದ್ಯರ ತಂಡವನ್ನು ಬೆಲ್ಜಿಯಂಗೆ ರವಾನೆ ಮಾಡಲಾಗಿತ್ತು.
ತಮ್ಮ ಪುತ್ರನ ಆರೋಗ್ಯ ವಿಚಾರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಜಾನೆ 4 ಗಂಟೆ ಸುಮಾರಿಗೆ ಬೆಂಗಳೂರಿನ ದೇವನಹಳ್ಳಿ ವಿಮಾಣ ನಿಲ್ದಾಣದಿಂದ ಬೆಲ್ಜಿಯಂ ದೇಶದ ಬ್ರಸೆಲ್ಸ್ ನಗರಕ್ಕೆ ಪ್ರಯಾಣ ಬೆಳಸಿದ್ದಾರೆ.
ಬೆಲ್ಜಿಯಂ ಪ್ರವಾಸದಲ್ಲಿರುವ ಪುತ್ರನ ಅನಾರೋಗ್ಯ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕರೆ ಮಾಡಿ, ಪುತ್ರನ ಅನಾರೋಗ್ಯ ಕುರಿತು ಮಾಹಿತಿ ಪಡೆದುಕೊಡಿದ್ದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ