ಟ್ವೀಟರ್ ನಲ್ಲಿ ಮತ್ತೆ ಸಿಟಿ ರವಿ ಕಾಲೆಳೆದ ಸಿದ್ದರಾಮಯ್ಯ

ಭಾನುವಾರ, 20 ಅಕ್ಟೋಬರ್ 2019 (13:34 IST)
ಬೆಂಗಳೂರು : ಮಾಜಿ ಸಿಎಂ  ಸಿದ್ದರಾಮಯ್ಯ ಮತ್ತೆ ಟ್ವೀಟರ್ ನಲ್ಲಿ ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ  ವ್ಯಂಗ್ಯಮಾಡಿದ್ದಾರೆ.



ಈ ಕುರಿತು ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಕುಡಿದ ಮತ್ತಿನಲ್ಲಿ ಅಪಘಾತ ಮಾಡಿ ಸಾಯಿಸಿದವರ ಬಗ್ಗೆ ಹೇಳಿದರೆ ಸಿಟಿ ರವಿ ಯಾಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ  ಎಂದು ಲೇವಡಿ ಮಾಡಿದ್ದಾರೆ.


 

ನಾನು ಒಳ್ಳೆಯ ವಕೀಲನಾಗಿರುವ ಕಾರಣಕ್ಕಾಗಿಯೇ ಆರೋಪಿಯನ್ನು ಹೆಸರಿಸಿಲ್ಲ. ಪ್ರತಿಕ್ರಿಯಿಸುವ ಮೊದಲು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅರಿವಿರಲಿ, ನೀವು ಆ ಖಾತೆಯ ಸಚಿವರು ಎಂದು ಟಾಂಗ್ ನೀಡಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ