ಸಿದ್ದರಾಮಯ್ಯ v/sಬಿಜೆಪಿ ಟ್ವೀಟ್ ವಾರ್

ಗುರುವಾರ, 30 ಮಾರ್ಚ್ 2023 (20:55 IST)
ಶ್ರೀ ರಾಮನವಮಿ ದಿನದಂದು ವಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನ ಬಿಜೆಪಿ ಟ್ವೀಟ್ ನಲ್ಲಿ ಕಾಲೆಳೆದಿದ್ದು ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಕೌಂಟರ ಕೊಟ್ಟಿದ್ದಾರೆ.ಮಹಾತ್ಮ ಗಾಂಧಿಯವರು ನಂಬಿದ್ದ ಮಾನವೀಯ ಗುಣಗಳ, ಮಾತೃಹೃದಯದ, ಸರ್ವವನ್ನೂ ಪ್ರೀತಿಸುವ ರಾಮನ ಅನುಯಾಯಿ ನಾನು.ರಾಮನ ಹೆಸರಿನಲ್ಲಿ ದ್ವೇಷಬಿತ್ತಿ, ಮನಸುಗಳನ್ನು ಒಡೆದು ಚುನಾವಣೆಯಲ್ಲಿ ಲಾಭ ಪಡೆಯುವವರು ನೀವು.ನನ್ನ ರಾಮ ಅಂತಃಕರಣ ಸ್ವರೂಪಿ,ನಿಮಗೆ ರಾಮ ಚುನಾವಣಾ ಸರಕು. ಶ್ರೀರಾಮನೇ ನಿಮಗೆ ಸದ್ಬುದ್ಧಿ ನೀಡಲಿ ಎಂದು ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ