ಐದು ವರ್ಷ ಪೂರ್ಣಗೊಳಿಸುತ್ತಿರುವ ಮುಖ್ಯಮಂತ್ರಿ ಎಂದು ಹೇಳಿಕೊಂಡ ಸಿದ್ದರಾಮಯ್ಯ

ಶುಕ್ರವಾರ, 15 ಡಿಸೆಂಬರ್ 2017 (20:24 IST)
ದಿವಂಗತ ದೇವರಾಜು ಅರಸು ಅವರ ಬಳಿಕ ರಾಜ್ಯದಲ್ಲಿ ಐದು ವರ್ಷ ಪೂರ್ಣಗೊಳಿಸುತ್ತಿರುವ ಮೊದಲ ಮುಖ್ಯಮಂತ್ರಿ ನಾನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದ ನವ ಕರ್ನಾಟಕ ನಿರ್ಮಾಣ ಸಾಧನಾ ಸಮಾವೇಶ ಮಾತನಾಡಿದ ಅವರು, ನನಗೆ ತೊಡರುಗಾಲು ಹಾಕಲು ಪ್ರತಿಪಕ್ಷಗಳು ಯತ್ನಿಸಿದವು. ಅವರ ಆಟ ನಡೆಯಲಿಲ್ಲ ಎಂದಿದ್ದಾರೆ.

ಬಸವಣ್ಣ, ಅಂಬೇಡ್ಕರ್‌, ಕನಕದಾಸ, ವಾಲ್ಮೀಕಿ ಅವರ ಆಶಯಗಳನ್ನು ಜಾರಿಗೊಳಿಸಲು ಶ್ರಮಿಸುತ್ತಿದ್ದೇನೆ. ವಿರೋಧ ಪಕ್ಷಗಳಿಂದ ಏನೆಲ್ಲಾ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ತಿವಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ