ಕೈ ನಾಯಕರ ಬಂಡಾಯ ಶಮನಕ್ಕೆ ಮುಂದಾದ ಸಿದ್ದರಾಮಯ್ಯ

ಮಂಗಳವಾರ, 16 ಅಕ್ಟೋಬರ್ 2018 (14:36 IST)
ರಾಜ್ಯದಲ್ಲಿ ಉಪಚುನಾವಣೆ ಕಾವಿನ ನಡುವೆ ಕೈ ಪಾಳೆಯದಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನ ಸಭೆ ಕ್ಷೇತ್ರದ ಕಾಂಗ್ರೆಸ್ ನಾಯಕರಲ್ಲಿ ಅಸಮಧಾನ ಭುಗಿಲೆದ್ದಿದೆ. ಕಾಂಗ್ರೆಸ್ ಮುಖಂಡ ಸುಶಿಲ್ ಕುಮಾರ ಬೆಳಗಲಿ ಬಂಡಾಯದ ಬಾವುಟ ಹಾರಿಸಿದ್ದಾರೆ.

ಹೀಗಾಗಿ ಸುಶೀಲ್ ಕುಮಾರ ಬೆಳಗಲಿ ಜತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆಗೆ ಆಹ್ವಾನಿಸಿದ್ದಾರೆ.  

ಜಮಖಂಡಿ ನಗರದ ಬಿ ಎಲ್ ಡಿ ಇ ಗೆಸ್ಟ್ ಹೌಸ್ ನಲ್ಲಿ ಮಾತುಕತೆ ನಡೆಯಲಿದೆ. ಈ ವೇಳೆ ಜಮಖಂಡಿ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜತೆಗೆ ಪಕ್ಷದಲ್ಲಿ ಒಗ್ಗಟ್ಟು ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಮುಖಂಡರಿಗೆ, ಮಾಜಿ ಸಿಎಂ ಹೇಳಲಿದ್ದಾರೆ.

ಬಂಡಾಯ ಎದ್ದಿರುವ ಸುಶೀಲ್ ಕುಮಾರ ಬೆಳಗಲಿ ಮನವೊಲಿಸುವ ಕಾರ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿದ್ದಾರೆ. ವಿಧಾನ ಸಭೆ ಉಪಚುನಾವಣೆಯ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನಗೊಂಡಿದ್ದ ಬೆಳಗಲಿ ಅತೃಪ್ತಿ ಹೊರಹಾಕಿದ್ದರು. ಸಿದ್ದರಾಮಯ್ಯರ ಮನವೊಲಿಕೆಗೆ ಸಹಮತ ವ್ಯಕ್ತಪಡಿಸುತ್ತಾರಾ? ಎನ್ನುವ ಕುತೂಹಲ ಮೂಡಿಸಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ