ಡ್ರಗ್ಸ್ ಮಾಫಿಯಾ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಸೋಮವಾರ, 7 ಸೆಪ್ಟಂಬರ್ 2020 (22:16 IST)
ಸ್ಯಾಂಡಲ್ ವುಡ್ ಸೇರಿದಂತೆ ರಾಜ್ಯದಲ್ಲಿ ಹೊರಬರುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೊಡೆತಟ್ಟಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಡ್ರಗ್ಸ್ ಜಾಲದ ಬಗ್ಗೆಯೇ ಚರ್ಚೆ ಶುರು ಮಾಡಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ನ ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿರುವ ಸಿದ್ದರಾಮಯ್ಯ, ಪಕ್ಷದ ನಾಯಕರಿಗೆ ಸಲಹೆ, ಸೂಚನೆಗಳನ್ನು ಕೊಟ್ಟಿದ್ದಾರೆ.

ಡಿ.ಜೆ ಹಳ್ಳಿ ಗಲಭೆ, ಡ್ರಗ್ಸ್ ಕೇಸ್, ಕೊರೊನಾ ಹಣದ ಹಗರಣ ಸೇರಿದಂತೆ ಹಲವು ವಿಷಯಗಳೊಂದಿಗೆ ಸರಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅಖಾಡಕ್ಕೆ ಇಳಿಯಲಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ