ಹುಚ್ಚನಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ- ಯಡಿಯೂರಪ್ಪ ಟೀಕೆ

ಮಂಗಳವಾರ, 9 ಜನವರಿ 2018 (17:32 IST)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಹುಚ್ಚನಂತೆ ಮಾತನಾಡುತ್ತಿದ್ದು, ಅವರೊಬ್ಬ ತಲೆತಿರುಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ನೈತಿಕತೆಯಿಲ್ಲ. ಗೋಮಾಂಸ ಮಾತ್ರವಲ್ಲ ಸಿದ್ದರಾಮಯ್ಯ ತಿನ್ನದೆ ಇರುವುದು ಏನಿದೆ ಎಂದು ಪ್ರಶ್ನಿಸಿದ್ದಾರೆ.

ಜೈಲಿಗೆ ಹೋಗಿ ಬಂದವರು ಎಂದು ಮತ್ತೆ ಮತ್ತೆ ಹೇಳಿಗೆ ಜನರು ಬಡಿಗೆ ತೆಗೆದುಕೊಳ್ಳುತ್ತಾರೆ. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡಲಿದ್ದು, ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರದಲ್ಲಿ ನಾವು ಸ್ಪರ್ಧಿಸುತ್ತೇವೆ 150 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ