ಕೆಆರ್ ಎಸ್ ಬಳಿ ಕಾವೇರಿ ಪ್ರತಿಮೆ ನಿರ್ಮಾಣದ ಬಗ್ಗೆ ಸಿದ್ದರಾಮಯ್ಯ ಸಿಎಂ ಎಚ್ ಡಿಕೆಗೆ ಹೇಳಿದ್ದೇನು?

ಶನಿವಾರ, 24 ನವೆಂಬರ್ 2018 (11:22 IST)
ಮೈಸೂರು: ಕೆಆರ್ ಎಸ್ ಬಳಿ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕಾವೇರಿ ಪ್ರತಿಮೆ ಮತ್ತು ಪಾರ್ಕ್ ಸ್ಥಾಪನೆ ಬಗ್ಗೆ ಸರ್ಕಾರದ ಯೋಜನೆಗೆ ಎದುರಾಗಿರುವ ವಿರೋಧದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ‘ನಮ್ಮ ಸರ್ಕಾರದ ಅವಧಿಯಲ್ಲೇ ಈ ಯೋಜನೆ ಬಗ್ಗೆ ಚರ್ಚೆಯಾಗಿತ್ತು. ಸಿಎಂ ಎಚ್ ಡಿಕೆ ತಜ್ಞರೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿ. ಆ ಮೂಲಕ ವಿರೋಧಿಸುವವರ ಅನುಮಾನ ಪರಿಹರಿಸಲಿ. ನಾನು ತಜ್ಞನಲ್ಲ’ ಎಂದಿದ್ದಾರೆ.

ಈ ನಡುವೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ‘ಸದ್ಯಕ್ಕೆ ರಾಹುಲ್ ಗಾಂಧಿಯವರು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಬಳಿಕ ರಾಹುಲ್ ಬಳಿ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಾಂಗ್ರೆಸ್ ಪಾಲಿಗಿರುವ ಆರು ಸ್ಥಾನಗಳಿಗೆ ಸಚಿವ ಸ್ಥಾನ ಹಂಚಿಕೆಯಾಗಲಿದೆ. ಸಮ್ಮಿಶ್ರ ಸರ್ಕಾರ ಈಗಷ್ಟೇ ಆರು ತಿಂಗಳು ಪೂರೈಸಿದೆ. ಈಗಾಗಲೇ ಅದರ ಸಾಧನೆ ಬಗ್ಗೆ ಹೇಳಲಾಗದು. ನಮ್ಮ ಸಮ್ಮಿಶ್ರ ಸರ್ಕಾರ ಚೆನ್ನಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ