ಬಿಎಸ್ ವೈ ಪುತ್ರ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್: ಸಿದ್ದರಾಮಯ್ಯ

ಶನಿವಾರ, 27 ಅಕ್ಟೋಬರ್ 2018 (08:18 IST)
ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಇಲ್ಲಿ ಮಧು ಬಂಗಾರಪ್ಪನವರಿಗೆ ಇರುವ ಜನಸ್ಪಂದನೆ ನೋಡಿದರೆ ಬಿಎಸ್ ವೈ ಪುತ್ರ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್ ಎನಿಸುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇನ್ನು ಶಿವಮೊಗ್ಗದಲ್ಲಿ ಈ ಬಾರಿ ಜೆಡಿಎಸ್ ಗೆಲ್ಲಲಿದೆ. ಬಿಜೆಪಿ ಎಲ್ಲಾ ಐದೂ ಸ್ಥಾನಗಳಲ್ಲಿ ಸೋಲಲಿದೆ ಎಂದೂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ