ದೇಣಿಗೆ ನೀಡುತ್ತೇವೆಂದು ಘೋಷಿಸಿ ಟ್ರೋಲ್ ಆದ ಸಿದ್ದರಾಮಯ್ಯ

ಶನಿವಾರ, 15 ಮೇ 2021 (11:13 IST)
ಬೆಂಗಳೂರು: ಕೊರೋನಾ ವಿರುದ್ಧ ಹೋರಾಡಲು ಎಲ್ಲಾ ಕಾಂಗ್ರೆಸ್ ಶಾಸಕರು ತಮ್ಮ ಶಾಸಕರ ನಿಧಿಯಿಂದ 100 ಕೋಟಿ ರೂ. ದೇಣಿಗೆ ನೀಡುವುದಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಕೆಲವರು ಟ್ರೋಲ್ ಮಾಡಿದ್ದಾರೆ.


ಕಾಂಗ್ರೆಸ್ ಶಾಸಕರು ನೀಡಲು ಮುಂದಾಗಿರುವುದು ಶಾಸಕರ ಕ್ಷೇತ್ರಕ್ಕೆ ಮೀಸಲಾಗಿಡುವ ಅನುದಾನವನ್ನೇ ಹೊರತು ಕಾಂಗ್ರೆಸ್ ನಾಯಕರು ಸ್ವಂತ ವೆಚ್ಚ ಮಾಡುತ್ತಿರುವುದಲ್ಲ. ಇದಕ್ಕೆ ಯಾಕೆ ಇಷ್ಟೊಂದು ಬಿಲ್ಡಪ್ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಕೊರೋನಾ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ನಾಯಕರು 100 ಕೋಟಿ ರೂ. ದೇಣಿಗೆ ನೀಡಲಿದ್ದಾರೆ. ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ, ಕೊರೋನಾ ತೊಲಗುವಂತಾಗಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ