ಸಿದ್ದರಾಮಯ್ಯರಿಂದ ಕಾಂಗ್ರೆಸ್ ಆತ್ಮಹತ್ಯೆಯತ್ತ ಸಾಗಿದೆ: ಪೂಜಾರಿ ವಾಗ್ದಾಳಿ

ಶನಿವಾರ, 9 ಜುಲೈ 2016 (17:31 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ತನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ತಲುಪಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ್ ಪೂಜಾರಿ ಆರೋಪಿಸಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ್ ಪೂಜಾರಿ, ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಯಾಗಿದ್ದರು. ಸಾಯುವ ಮುನ್ನ ಯಾರು ಸುಳ್ಳು ಹೇಳುವುದಿಲ್ಲ. ಸಾವಿಗೂ ಮುನ್ನ ಹೇಳಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಪರಿಗಣಿಸುವಂತೆ ಆದೇಶ ನೀಡಿದೆ. ಡಿವೈಎಸ್‌ಪಿ ಗಣಪತಿ ಅವರು ಆತ್ಮಹತ್ಯೆಗೂ ಮುಂಚೆ ಮಾಹಿತಿ ನೀಡಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಆಗ್ರಹಿಸಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಜಿ ಗೃಹ ಸಚಿವ ಜಾರ್ಜ್ ಅವರನ್ನು ಬಚಾವ್ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಅವರ ವರ್ತನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ತಲುಪಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ್ ಪೂಜಾರಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ