ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ದೊರೆತಿದ್ದು, 2016 ರ ಸಾಲಿನ ಜನವರಿ 1 ರಿಂದಲೇ ವೇತನ ಹೆಚ್ಚಳ ಅನ್ವಯವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಾರಿಗೆ ದರ ಹೆಚ್ಚಳ ಕುರಿತು ಸಧ್ಯ ಯಾವುದೇ ಪ್ರಸ್ತಾವನೆ ಇಲ್ಲ. 2016 ರ ಸಾಲಿನ ಜನವರಿ 1 ರಿಂದಲೇ ವೇತನ ಪೂರ್ವನ್ವಯ ಜಾರಿಯಾಗಲಿದೆ ಎಂದು ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಸಾರಿಗೆ ನೌಕರರು 42 ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದೆ ಇಟ್ಟಿದ್ದರು. 42 ಬೇಡಿಕೆಗಳ ಪೈಕಿ ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ತಿಳಿಸಿದರು.
ಅಂತರ ನಿಗಮ ವರ್ಗಾವಣೆ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಇದು ಜಾರಿಯಾದರೆ 15 ರಿಂದ 20 ಸಾವಿರ ನೌಕರರ ವರ್ಗಾವಣೆಯಾಗುತ್ತದೆ. ಒಮ್ಮೆ ಮಾತ್ರ ಅಂತರ ನಿಗಮ ವರ್ಗಾವಣೆಯನ್ನು ಜಾರಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ