ಸಿಎಂ ಬಿಎಸ್ ವೈಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಶನಿವಾರ, 5 ಅಕ್ಟೋಬರ್ 2019 (13:33 IST)
ಮಂಗಳೂರು : ರಾಜ್ಯ ನೆರೆ ಪರಿಹಾರಕ್ಕೆ ಕೇವಲ 1200ಕೋಟಿ ರೂ ಪರಿಹಾರ ನೀಡಿರುವುದರ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.



ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕನಿಷ್ಠ 5 ಸಾವಿರ ಕೋಟಿ ರೂ. ಪ್ರವಾಹ ಪರಿಹಾರ ನೀಡುವಂತೆ ಕೇಳಿದ್ದೆವು. ಆದರೆ, ಎರಡು ತಿಂಗಳ ನಂತರ ಕೇವಲ 1200 ಕೋಟಿ ರೂಪಾಯಿ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಅಲ್ಲದೇ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣ ನೀಡಬೇಕಾಗಿತ್ತು. ಆದರೆ ಸಿಎಂ ಯಡಿಯೂರಪ್ಪ ಖಜಾನೆಯಲ್ಲಿ ಹಣವಿಲ್ಲ ಅಂತಾರೆ. ಸಿಎಂ ಬಿಎಸ್ ವೈಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ. ಖಜಾನೆಯಲ್ಲಿ ಹಣ ಖಾಲಿಯಾಗಲು ಚಾನ್ಸೇ ಇಲ್ಲ. ಯಾಕೆಂದರೆ ಪ್ರತಿ ತಿಂಗಳು ತೆರಿಗೆ ಹಣ ಸಂಗ್ರಹವಾಗುತ್ತದೆ  ಎಂದು ಅವರು ಕಿಡಿಕಾರಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ