ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ

ಶುಕ್ರವಾರ, 3 ಫೆಬ್ರವರಿ 2023 (11:11 IST)
ಬೆಂಗಳೂರು : ಫೆಬ್ರವರಿ 3ರಿಂದ ಕಾಂಗ್ರೆಸ್ 2ನೇ ಹಂತದ ಬಸ್ ಯಾತ್ರೆ ಆರಂಭವಾಗುತ್ತಿದೆ. ಬೀದರ್ನಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೋಲಾರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಯಾತ್ರೆ ಆರಂಭಿಸುತ್ತಿದ್ದಾರೆ.

2 ದಿನಗಳ ಕಾಲ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ ಕೈಗೊಳ್ಳಲಿದ್ದಾರೆ. ಮುಳಬಾಗಿಲಿನ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಡಿಕೆಶಿ ಪ್ರಜಾಧ್ವನಿ ಯಾತ್ರೆ ಆರಂಭಿಸಲಿದ್ದಾರೆ. ಇತ್ತ ಬಸವಕಲ್ಯಾಣದಿಂದ ಸಿದ್ದರಾಮಯ್ಯ ಬಸ್ ಯಾತ್ರೆ ಮಾಡಲಿದ್ದಾರೆ. 

ಈ ನಡುವೆಯೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಡಿಕೆಶಿ ಜೊತೆ ಬಸ್ ಯಾತ್ರೆಗೆ ಹೋಗಲ್ಲ ಅಂತಾ ಡಾ. ಪರಮೇಶ್ವರ್ ಪಟ್ಟು ಹಿಡಿದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ