ವೈದ್ಯರ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಸಿಡಿಮಿಡಿ

ಶನಿವಾರ, 22 ಆಗಸ್ಟ್ 2020 (22:36 IST)
ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ಇದೇ ಮೊದಲ ಬಾರಿಗೆ ಕೆಲವು ವೈದ್ಯರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಪ್ರತಿಭಟನೆಯ ಹಾದಿಯನ್ನು ಕೆಲವು ಕೊರೊನಾ ವಾರಿಯರ್ ಗಳು ತುಳಿದಿದ್ದಾರೆ. ಇದರಿಂದ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ.

ಪ್ರತಿಭಟನೆ ನಡೆಸುತ್ತಿರುವವರಿಗೆ ಕುಮ್ಮಕ್ಕು ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಏನೂ ಗೊತ್ತಿಲ್ಲದ ಅಮಾಯಕ ವೈದ್ಯರನ್ನು ಹಿಡಿದುಕೊಂಡು ಸರಕಾರದ ವಿರುದ್ಧ ಪ್ರತಿಭಟನೆ ನಡೆಸೋದು ಸರಿಯಲ್ಲ ಎಂದಿದ್ದಾರೆ.

ಇನ್ನು, ಒತ್ತಡದಲ್ಲಿ ಕೆಲಸ ಮಾಡಲು ಆಗದಿದ್ದರೆ ಅಂಥವರು ಸ್ವತಂತ್ರವಾಗಿ ಖಾಸಗಿಯಾಗಿ ಕೆಲಸ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ