ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಬಿಎಸ್ವೈ ಬೆಂಬಲಿಗರ ಸಹಿ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರಾಜು, ಕೆ.ಎಸ್.ಈಶ್ವರಪ್ಪ ಸೇರಿದಂತೆ ಕೆಲವರಿಂದ ಪಕ್ಷ ವಿರೋಧಿ ಚಟುವಟಿಕೆ ನಡೆಯುತ್ತಿದೆ. ಹೀಗಾಗಿ ಸಹಿ ಸಂಗ್ರಹಿಸಿರುವುದು ನಿಜ ನಾನು ಸಹ ಸಹಿ ಮಾಡಿದ್ದೇನೆ ಎಂದು ತಿಳಿಸಿದರು.
ಬಿಜೆಪಿ ಕಾರ್ಯಕಾರಣಿಯಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವರು ನನ್ನ ವಿರುದ್ಧ ಸಹಿ ಸಗ್ರಹಕ್ಕೆ ಮುಂದಾಗಿದ್ದಾರೆ. ಆದರೆ, ಸಹಿ ಸಂಗ್ರಹಕ್ಕೆ ಯಾವುದೇ ಬೆಲೆ ಇಲ್ಲ, ಅದು ಅಶಿಸ್ತು. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂತಹ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದರು.