ಎಸ್ ಎಂ ಕೃಷ್ಣ ಬಿಜೆಪಿ ಸೇರ್ಪಡೆ ಡೇಟ್ ಫಿಕ್ಸ್

ಸೋಮವಾರ, 13 ಮಾರ್ಚ್ 2017 (10:37 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಬಿಜೆಪಿ ಸೇರುವ ದಿನಾಂಕ ನಿಗದಿಯಾಗಿದೆ. ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇದನ್ನು ಸ್ಪಷ್ಟಪಡಿಸಿದ್ದಾರೆ.

 
ಮಾರ್ಚ್ 15 ರಂದು ಅಂದರೆ, ಇದೇ ಬುಧವಾರ ಕಾಂಗ್ರೆಸ್ ನ ಮಾಜಿ ನಾಯಕ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ  ಎಂದು ಯಡಿಯೂರಪ್ಪ ಹೇಳಿದ್ದಾರೆ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಅಧಿಕೃತವಾಗಿ ಸೇರಲಿದ್ದಾರೆ.

ಈಗಾಗಲೇ ಕೃಷ್ಣ ಬಿಜೆಪಿ ಸೇರಲು ಯಡಿಯೂರಪ್ಪ ಮತ್ತು ಮಾಜಿ ಸಚಿವ ಆರ್. ಅಶೋಕ್ ಅವರ ಮನೆಗೇ ತೆರಳಿ ಅಧಿಕೃತ ಆಹ್ವಾನವಿತ್ತಿದ್ದರು. ಇದೀಗ 15 ರಂದು ದೆಹಲಿಯಲ್ಲಿ ಕೃಷ್ಣ ತಮ್ಮ ಸುದೀರ್ಘ ಕಾಲದ ಕಾಂಗ್ರೆಸ್ ಪಕ್ಷದ ಬದುಕಿಗೆ ವಿದಾಯ ಹೇಳಿ ಬಿಜೆಪಿ ಸೇರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ