ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಕೆಲವರು ದೊಡ್ಡ ಮಟ್ಟದಲ್ಲಿ ಬಿಂಬಿಸುತ್ತಿದ್ದಾರೆ. ಆದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅಭಿಪ್ರಾಯಪಟ್ಟರು.
ದೇಶಾದ್ಯಂತ 500, 1000 ಮುಖಬೆಲೆಯ ನೋಟು ನಿಷೇಧ ಬಳಿಕ ಪ್ರಧಾನಿ ಮೋದಿ ಅವರು 50 ದಿನಗಳ ಕಾಲಾವಕಾಶ ಕೇಳಿದ್ದರು. ಅದರಂತೆ, ಅವರು ಜನತೆಗೆ ನೀಡಿದ ಭರವಸೆ ಪ್ರಕಾರ ಅಲ್ಪಾವಧಿಯಲ್ಲಿಯೇ ಸುಧಾರಣೆ ಕಂಡಿದೆ. ಭವಿಷದಲ್ಲಿ ಇದರ ಹೆಚ್ಚಿನ ಪ್ರಯೋಜನೆ ಜನತೆಗೆ ನಿಚ್ಚಳವಾಗಲಿದೆ ಕೇಂದ್ರ ಸಚಿವ ಸದಾನಂದಗೌಡ ಹೇಳಿದರು.