ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಮಹುಂಡಿಯಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ 1.30ಕ್ಕೆ ಮತ ಚಲಾಯಿಸಲು ಬರುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಯನ್ನು ಕೈಗೊಳ್ಳಲಾಯಿತು. ಆ ಸಂದರ್ಭದಲ್ಲಿ ಶಾಲೆಯ ಅಡುಗೆ ಕೋಣೆಯ ಹಿಂಭಾಗದಲ್ಲಿ ಹಾವೊಂದು ಕಾಣಿಸಿಕೊಂಡಿದೆ. ಹೀಗಾಗಿ ಸ್ಥಳದಲ್ಲಿ ಸ್ವಲ್ಪ ಸಮಯ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೊಂದು ರೈತ ಸ್ನೇಹಿ ಹಾವಾಗಿದ್ದು, ಅದರಿಂದ ಯಾವುದೇ ಅಪಾಯವಿರಲಿಲ್ಲ. ಆದರೆ ಸ್ಥಳೀಯರು ಅನಗತ್ಯವಾಗಿ ಅದನ್ನು ಕೊಂದು ಹಾಕಿದ್ದಾರೆ.