ನನ್ನನ್ನು ಸೋಲಿಸ್ತಿನಿ ಎಂದು ತುಂಬಾ ಜನ ಹೇಳ್ತಾರೆ: ಶ್ರೀನಿವಾಸ್ ಪ್ರಸಾದ್‌ಗೆ ಸಿಎಂ ಟಾಂಗ್

ಸೋಮವಾರ, 17 ಅಕ್ಟೋಬರ್ 2016 (17:11 IST)
ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿಯನ್ನು ಸೋಲಿಸುವುದೇ ನನ್ನ ಗುರಿ ಎಂದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ಮುನ್ನ ಸಾಕಷ್ಟು ಜನ ಈ ರೀತಿ ಹೇಳುತ್ತಾರೆ ಎಂದು ಖಾರವಾಗಿ ಹೇಳಿದರು

ಚುನಾವಣೆಗೂ ಮುನ್ನ ಶ್ರೀನಿವಾಸ್ ಪ್ರಸಾದ್ ಅವರಂತೆಯೇ ಸಾಕಷ್ಟು ಜನ ಹೇಳಿಕೆ ನೀಡುತ್ತಾರೆ. ಮುಂದೆ ನೋಡೋಣ. ಚುನಾವಣೆಯಲ್ಲಿ ಸೋಲು ಗೆಲುವನ್ನು ರಾಜ್ಯದ ಜನತೆ ನಿರ್ಧರಿಸುತ್ತಾರೆ ಎಂದರು. 
 
ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀನಿವಾಸ ಪ್ರಸಾದ್ ಅವರು, ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿಯನ್ನು ಸೋಲಿಸುವುದೆ ನನ್ನ ಗುರಿ. ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸೋಲಿಸುವವರೆಗೂ ನನಗೆ ನೆಮ್ಮದಿಯಿಲ್ಲ ಎಂದು ಹೇಳಿದ್ದರು.
 
ಬಡವರಿಗೆ ಅನ್ನಭಾಗ್ಯ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಯಲ್ಲಿ 80 ಲಕ್ಷ ಬೆಲೆಯ ಹ್ಯೂಬ್ಲೆಟ್ ವಾಚ್. ತಮ್ಮ ಕೈಯಲ್ಲಿ ಕಟ್ಟಿದ್ದ ವಾಚ್ ಬೆಲೆ ಅವರಿಗೆ ಗೊತ್ತಿರಲಿಲ್ಲವೇ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ