ಮೂಲಗಳ ಪ್ರಕಾರ, ನವದೆಹಲಿಯ ರಾಮ್ಲೀಲಾ ಮೈದಾನದಲ್ಲಿ ಧರಣಿ ಕೂರಲು ಹಜಾರೆ ನಿರ್ಧರಿಸಲಾಗಿದ್ದು, ಪ್ರಮುಖವಾಗಿ ಏಕ ರೂಪದ ಪಿಂಚಿಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಹಾಗೂ ಈಗಾಗಲೇ ಕಲೆದ ಜನವರಿ 12ರಂದು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೊಳಿಸಲಾಗಿರುವ, ರೈತರಿಗೆ ಮಾರಕವಾಗಿರುವ ಭೂ ಸ್ವಾಧೀನ ತಿದ್ದುಪಡಿ ಕಾಯಿದೆಯನ್ನು ಹಿಂಪಡೆಯುವಂತೆ ವಿರೋಧಿಸಿ ಮಹಾತ್ಮ ಗಾಂಧಿ ಅವರ ಜನ್ಮದಿನವಾದ ಅಕ್ಟೋಬರ್ 2ರಿಂದ ಅನಿರ್ಧಿಷ್ಟಾವಧಿವರೆಗೆ ಧರಣಿ ಕೂರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.