ಕೌಟುಂಬಿಕ ಕಲಹಕ್ಕೆ ನೊಂದು ಯೋಧ ಆತ್ಮಹತ್ಯೆ

ಮಂಗಳವಾರ, 2 ಫೆಬ್ರವರಿ 2016 (10:24 IST)
ನಿರಂತರ ಮಾನಸಿಕ ಕಿರುಕುಳದಿಂದ ಬೇಸತ್ತ ಯೋಧನೊಬ್ಬ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಮೃತನನ್ನು 36 ವರ್ಷದ ಸಿ.ಟಿ ಪ್ರದೀಪ್ ಎಂದು ಗುರುತಿಸಲಾಗಿದ್ದು ಆತ ಮದ್ರಾಸ್ ರೆಜಿಮೆಂಟ್‌ನಲ್ಲಿ ಯೋಧನಾಗಿ ಕಾರ್ಯ ನಿರ್ವಹಿಸುತ್ತಿದ್ದ. 
 
ನಿನ್ನೆ ರಾತ್ರಿ ವಿಷ ಸೇವಿಸಿ ಒದ್ದಾಡುತ್ತಿದ್ದ ಆತನನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತ ಪಟ್ಟಿದ್ದಾನೆ.
 
ದುಡುಕಿನ ನಿರ್ಧಾರಕ್ಕೆ ಕೈ ಹಾಕುವ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಆತ ನನ್ನ ಪತ್ನಿ ಅತ್ತೆ ಮಾವ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಸೇನೆ ಬಿಟ್ಟು ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಿದ್ದಾನೆ. 
 
ಚಿಕ್ಕಮಗಳೂರು ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ