ಬುದ್ಧಿಮಾತು ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪಾಪಿಮಗ

ಸೋಮವಾರ, 18 ಫೆಬ್ರವರಿ 2019 (07:05 IST)
ಚಿಕ್ಕಮಗಳೂರು : ಬುದ್ಧಿಮಾತು ಹೇಳಿದ್ದಕ್ಕೆ ಮಗನೊಬ್ಬ ಹೆತ್ತ ತಾಯಿಯನ್ನು ಹೊಡೆದು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹೊಕಳಿ ಗ್ರಾಮದಲ್ಲಿ ನಡೆದಿದೆ.


ಸಾಕಮ್ಮ(55) ಕೊಲೆಯಾದ ಮಹಿಳೆ. ನಂದೀಶ್ ತಾಯಿಯನ್ನು ಕೊಂದ ಮಗ. ಈತನಿಗೆ ತಾಯಿ ಮನೆಯಲ್ಲಿ ಇರಬೇಡ. ಕೆಲಸಕ್ಕೆ ಹೋಗಿ ದುಡಿಯುವಂತೆ ಬುದ್ಧಿವಾದ ಹೇಳಿದ್ದಾಳೆ. ತಾಯಿ ಹಾಗೇ ಹೇಳಿದ್ದಕ್ಕೆ ಕೋಪಗೊಂಡ ಮಗ ನಂದೀಶ್ ದೊಣ್ಣೆಯಿಂದ ತಾಯಿಗೆ ಹೊಡೆದಿದ್ದಾನೆ.


ತೀವ್ರ ರಕ್ತಸ್ರಾವದಿಂದ ತಾಯಿ ಸಾಕಮ್ಮ ಸ್ಥಳದಲ್ಲೆ ಮೃತಪಟ್ಟಿದ್ದಾಳೆ. ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶೃಂಗೇರಿ ಠಾಣಾ ಪೊಲೀಸರು ಆರೋಪಿ ನಂದೀಶನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ