ಕನಕಪುರ ಬಂಡೆಗೆ ಧೈರ್ಯ ತುಂಬಿದ ಸೋನಿಯಾ ಗಾಂಧಿ

ಬುಧವಾರ, 23 ಅಕ್ಟೋಬರ್ 2019 (14:52 IST)
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಹಾರ್ ಜೈಲಿನಲ್ಲಿರೋ ಮಾಜಿ ಸಚಿವ ಡಿ ಕೆ ಶಿವಕುಮಾರ್ ರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.

ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿರೋ ಕೆ.ಸಿ. ವೇಣುಗೋಪಾಲ್ ಅವರ ಜೊತೆಗೆ ಸೋನಿಯಾ ಗಾಂಧಿ ಆಗಮಿಸಿ ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿದ್ರು.

ಕಾಂಗ್ರೆಸ್ ಹಾಗೂ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ, ಮುಖಂಡರೂ ನಿಮ್ಮ ಜೊತೆಗೆ ಇದ್ದಾರೆ. ಧೈರ್ಯವಾಗಿರಿ ಅಂತ ಡಿಕೆಶಿಗೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ.  

ಸೋನಿಯಾ ಗಾಂಧಿ ಭೇಟಿ ಬಳಿಕ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದು, ಸೋನಿಯಾ ಗಾಂಧಿ ಅವರು ಭೇಟಿ ನೀಡಿದ್ದು ಡಿಕೆಶಿಗೆ ಸಂತಸದಿಂದ ಇರುವಂತೆ ಹಾಗೂ ಧೈರ್ಯ ತುಂಬಿದಂತೆ ಆಗಿದೆ ಎಂದಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ