ಕಾಂಗ್ರೆಸ್ ಗೆ ಯಾವೆಲ್ಲಾ ನಾಯಕರು ಬರ್ತಾರೆ? ಶೀಘ್ರದಲ್ಲೇ ಹೇಳುವ ಎಂದ ಸಿಎಂ

ಗುರುವಾರ, 30 ನವೆಂಬರ್ 2017 (10:57 IST)
ಮೈಸೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕ ಪಕ್ಷಾಂತರ ಪರ್ವವೂ ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್  ಈ ವಿಷಯದಲ್ಲಿ ಪೈಪೋಟಿ ನಡೆಸುತ್ತಿದೆ.
 

ಮಾಜಿ ಶಾಸಕ ವಿಜಯ್ ಶಂಕರ್ ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಾಗಿದೆ. ಆದರೆ ಯಾರೆಲ್ಲಾ ಬರುತ್ತಾರೆಂದು ಶೀಘ್ರದಲ್ಲೇ ಹೆಸರು ಹೇಳುತ್ತೇನೆ ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ