ತಾಯಿ ಭವಾನಿ ರೇವಣ್ಣ ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸೂರಜ್ ರೇವಣ್ಣ

ಸೋಮವಾರ, 4 ಡಿಸೆಂಬರ್ 2023 (13:58 IST)
Photo Courtesy: Twitter
ಬೆಂಗಳೂರು: ತನ್ನ ಕೋಟಿ ರೂ. ಬೆಲೆ ಬಾಳುವ ಕಾರಿಗೆ ಬೈಕ್ ಸವಾರನೊಬ್ಬ ಗುದ್ದಿದ ಕಾರಣಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಸೊಸೆ, ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು.

ಬೈಕ್ ಸವಾರನೊಬ್ಬ ಕಾರಿಗೆ ಢಿಕ್ಕಿ ಹೊಡೆದಿದ್ದರಿಂದ ಭವಾನಿ ರೇವಣ್ಣ ಚಲಿಸುತ್ತಿದ್ದ ಕಾರಿನ ಮುಂಭಾಗಕ್ಕೆ ಹಾನಿಯಾಗಿತ್ತು. ಐಷಾರಾಮಿ ಕಾರಿಗೆ ಡಿಕ್ಕಿ ಹೊಡೆದ ಸಿಟ್ಟಿನಲ್ಲಿ ಭವಾನಿ ರೇವಣ್ಣ ಬೈಕ್ ಸವಾರನಿಗೆ ಅವಾಚ್ಯವಾಗಿ ನಿಂದಿಸಿದ್ದರು.

ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಭವಾನಿ ರೇವಣ್ಣ ಮಾನವೀಯತೆ ಮರೆತು ವರ್ತಿಸಿದ್ದಾರೆ ಎಂದು ಅನೇಕರು ಟೀಕಿಸಿದ್ದರು.

ಇದರ ಬೆನ್ನಲ್ಲೇ ಈಗ ಭವಾನಿ ರೇವಣ್ಣ ಪುತ್ರ ಸೂರಜ್ ರೇವಣ್ಣ ತಾಯಿ ಪರವಾಗಿ ಕ್ಷಮೆ ಯಾಚಿಸಿದ್ದಾರೆ. ಆಕ್ಸಿಡೆಂಟ್ ಯಾರೂ ಬೇಕೆಂದೇ ಮಾಡಲ್ಲ. ಆ ಸಂದರ್ಭದಲ್ಲಿ ನನ್ನ ತಾಯಿ ಬಳಸಿದ ಶಬ್ಧಗಳು ತಪ್ಪಾಗಿದೆ. ಅದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಸೂರಜ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ