ರೌಡಿಶೀಟರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ ಎಸ್ಪಿ

ಶುಕ್ರವಾರ, 26 ಅಕ್ಟೋಬರ್ 2018 (18:26 IST)
ಕೋಲಾರ ಜಿಲ್ಲೆಯಲ್ಲಿ ಅಶಾಂತಿ, ಕೋಮುಗಲಭೆಗಳಿಗೆ ಅವಕಾಶ ನೀಡದಂತೆ ಕಟ್ಟೆಚ್ಚರಿಕೆ ನೀಡಲು ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು.

ಕೋಲಾರ ಜಿಲ್ಲೆಯ 200ಕ್ಕೂ ಹೆಚ್ಚು ರೌಡಿಗಳ ಶೀಟರ್ ಗಳ  ಪರೇಡ್ ನಡೆಸಲಾಯಿತು. ಕೋಲಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.

ಕೋಲಾರ ಸೇರಿದಂತೆ ಮಾಲೂರು, ಮುಳಬಾಗಲು, ಶ್ರೀನಿವಾಸಪುರ ತಾಲೂಕಿನ ರೌಡಿಶೀಟರ್ ಗಳ ಪರೇಡ್ ಗಳು ಪಾಲ್ಗೊಂಡಿದ್ದರು.

ಕೋಲಾರ ಜಿಲ್ಲಾ ರಕ್ಷಣಾಧಿಕಾರಿ ರೋಹಿಣಿ ಕಟೋಚ್ ನೇತೃತ್ವದಲ್ಲಿ ಪರೇಡ್ ನಡೆಯಿತು. ಜಿಲ್ಲೆಯಲ್ಲಿ ಅಶಾಂತಿ, ಕೋಮುಗಲಭೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯನ್ನು ರೌಡಿಗಳಿಗೆ ನೀಡಲಾಯಿತು.
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಗಡಿಪಾರು ಮಾಡುವ ಎಚ್ಚರಿಕೆಯನ್ನು ಎಸ್ಪಿ ರೋಹಿಣಿ ಕಟೋಚ್ ಸೆಪಟ್ ನೀಡಿದರು.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ