ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯ ವಿಧಾನಸಭೆಯಲ್ಲಿ ನಮ್ಮ ಪಕ್ಷವು 40 ಮಂದಿ ಶಾಸಕರ ಬಣವನ್ನು ಹೊಂದಿದೆ. ನಿನ್ನೆ ನಡೆದ ಕಲಾಪದಲ್ಲಿ ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಯ ಬಗ್ಗೆ ಮಾತನಾಡಬೇಕೆಂದಿದ್ದೆ. ಆದರೆ ನಮಗೆ ಸದನದಲ್ಲಿ ಮಾತನಾಡಲು ಸಭಾಧ್ಯಕ್ಷರು ಅವಕಾಶ ನೀಡಿಲ್ಲ. ನಾವು ಟಿಎ, ಡಿಎ ಪಡೆದುಕೊಳ್ಳಲು ಸದನಕ್ಕೆ ಬರುತ್ತಿಲ್ಲ ಎಂದು ಮಾರ್ಮಿಕವಾಗಿ ನುಡಿಯುವ ಮೂಲಕ ಸಭಾಧ್ಯಕ್ಷರ ವಿರುದ್ಧದ ಅಸಮಧಾನವನ್ನು ಹೊರಹಾಕಿದ್ದಾರೆ.