ನರೇಂದ್ರಮೋದಿ ಮಾತು ಬೆಂಬಲಿಸಿದ ಎಸ್.ಆರ್.ಹಿರೇಮಠ

ಸೋಮವಾರ, 5 ಫೆಬ್ರವರಿ 2018 (22:06 IST)

ರಾಜ್ಯ ಕಾಂಗ್ರೆಸ್  ಸರ್ಕಾರ ಕಮಿಷನ್ ಸರ್ಕಾರ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರ ಮಾತಿನಲ್ಲಿ ಸತ್ಯವಿದೆ ಎಂದು ಸಾಮಾಜಿಕ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕಮಿಷನ್ ತೆಗೆದುಕೊಳ್ಳುತ್ತಿದೆ. ಆದರೆ, ಮೋದಿ ಅವರು ಪಕ್ಕದಲ್ಲಿ ಕೂಡಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಹಾಗೂ ಇತರರೆ ಭ್ರಷ್ಟರಿಗೆ ಪಕ್ಷದಲ್ಲಿ ಆಶ್ರಯ ಕೊಟ್ಟಿರುವ ಬಗ್ಗೆ ಯಾರು ಮಾತನಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಬೆಂಬಲ ನೀಡುವವರ ಅಕ್ರಮ ಆಸ್ತಿಯನ್ನು ಉಳಿಸಿಕೊಳ್ಳಲು ಮೋದಿ ಮೌನ ವಹಿಸಿದ್ದಾರೆ. ಈ  ಬಗ್ಗೆ ಜವಾಬ್ದಾರಿ ಇಲ್ಲವೇ ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ