ನಾಳೆ 12 ಗಂಟೆಗೆ ಸಭಾಪತಿ ಕೆ.ಬಿ. ಕೋಳಿವಾಡ ಅವರನ್ನು ಭೇಟಿಯಾಗಿ ಶಾಸಕ ರಾಜೀನಾಮೆ ಸಲ್ಲಿಸುತ್ತೇನೆ, ಬಳಿಕ ಕಾಂಗ್ರೆಸ್ ಪಕ್ಷಕ್ಕೂ ಗುಡ್ ಬೈ ಹೇಳುತ್ತೇನೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಮತ್ತೆ ಸ್ಪಷ್ಟಪಡಿಸಿದ್ದಾರೆ.
ಪ್ರಸಾದ್ 'ಕೈ' ಬಿಡುತ್ತಿದ್ದಾರೆ ಎಂಬುದು ಹೊರ ಬರುತ್ತಿದ್ದಂತೆ ಅವರ ನಿವಾಸವೀಗ ರಾಜಕೀಯ ಬೆಳವಣಿಗೆಯ ತಾಣವಾಗಿ ಬದಲಾಗಿದೆ. ಜೆಡಿಎಸ್, ಬಿಜೆಪಿ ಅವರನ್ನು ತಮ್ಮೆಡೆಗೆ ಸೆಳೆದುಕೊಳ್ಳಲು ರಾಜಕೀಯ ಕಸರತ್ತು ನಡೆಸುತ್ತಿದ್ದು ಪ್ರಸಾದ್ ಯಾವ ಪಕ್ಷದ ತೆಕ್ಕೆಕೆ ಸೇರುತ್ತಾರೆ ಎಂಬುದು ಸದ್ಯದಲ್ಲೇ ಬಹಿರಂಗವಾಗಲಿದೆ. ನಿನ್ನೆ ಸ್ಥಳೀಯ ಮುಖಂಡ ಪ್ರತಾಪ್ ಸಿಂಹ ಮತ್ತು ಬಿಜೆಪಿ ಇತರ ನಾಯಕರ ನಿಯೋಗ ಪ್ರಸಾದ್ ಅವರನ್ನು ಭೇಟಿಯಾದ ಮುಂದುವರೆದ ಭಾಗವಾಗಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದ ನಿಯೋಗ ಕೂಡ ಕೈ ನಾಯಕನ ಜತೆ ಮಾತುಕತೆ ನಡೆಸಿದರು.
ಬಳಿಕ ವರದಿಗಾರರೊಂದಿಗೆ ಮಾತನಾಡುತ್ತಿದ್ದ ವೀರಯ್ಯ, ಪ್ರಸಾದ್ ಕೇವಲ ರಾಜ್ಯ ನಾಯಕರಲ್ಲ, ರಾಷ್ಟ್ರ ನಾಯಕರು, ಕಾಂಗ್ರೆಸ್ ಅವರನ್ನು ಕಡೆಗಣಿಸಿದೆ ಎಂದಿದ್ದಾರೆ.