'ಕೈ'ಗೆ ಗುಡ್‌ ಬೈ ಹೇಳಿದ ವಿ.ಶ್ರೀನಿವಾಸ್ ಪ್ರಸಾದ್!

ಸೋಮವಾರ, 17 ಅಕ್ಟೋಬರ್ 2016 (12:36 IST)
ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದಾರೆ.
 
ಸಭಾಪತಿ ಕೆ.ಬಿ. ಕೋಳಿವಾಡ್ ಅವರನ್ನು ಭೇಟಿಯಾಗಿ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್  ತಮ್ಮ ಶಾಸಕ ಸ್ಥಾನಕ್ಕೆ ಅ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಜೆಡಿಎಸ್ ಹಾಗೂ ಬಿಜೆಪಿ ನಾಯಕರೊ ನಿರಂತರ ಸಂಪರ್ಕದಲ್ಲಿದ್ದರೂ ಸಹ ಶ್ರೀನಿವಾಸ್ ಯಾವ ಪಕ್ಷಕ್ಕೂ ಭರವಸೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. 
 
ಪಕ್ಷ ತೊರೆದ ನಂತರ, ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಡೆಯನ್ನಿಡುತ್ತಿದ್ದೇನೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ