ಭಾನುವಾರ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆದಿದ್ದರಿಂದ ಬೆಂಗಳೂರು ಉತ್ತರ, ದಕ್ಷಿಣ, ಗ್ರಾಮಾಂತರ ಸೇರಿದಂತೆ ವಿಜಯಪುರ, ಮೈಸೂರು, ಗದಗ್, ಕಲಬುರಗಿ, ಶಿವಮೊಗ್ಗ, ಬಳ್ಳಾರಿ, ಬೆಳಗಾವಿ ಶೈಕ್ಷಣಿಕ ಜಿಲ್ಲೆಗಳಲ್ಲಿ ನಿನ್ನೆ ಮೌಲ್ಯಮಾಪನವನ್ನು ಪ್ರಾರಂಭಿಸಿರಲಿಲ್ಲ. ಈ ಜಿಲ್ಲೆಗಳಲ್ಲಿ ಸೋಮವಾರದಿಂದ ಮೌಲ್ಯಮಾಪನ ಕಾರ್ಯ ಆರಂಭಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಮೂಲಗಳು ತಿಳಿಸಿವೆ.